ಖೋ ಖೋ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಅಜಯಕುಮಾರ ವಿ.ದಳವಾಯಿ ಆಯ್ಕೆ
ಸುರಪುರ ಟೈಮ್ಸ್ ವಾರ್ತೆ
ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದ ಅಜಯಕುಮಾರ ವೆಂಕಟೇಶ ದಳವಾಯಿ 14 ವರ್ಷದ ಬಾಲಕರ ಖೋ ಖೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಗೋಕಾಕ ತಾಲೂಕಿನ ನಾಗನೂರುನ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿದ್ದು, ರಾಜಸ್ಥಾನದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾನೆ .

