ಸಾಂಸ್ಕೃತಿಕ ನಾಯಕ, ಬಸವೇಶ್ವರ 892 ನೇ  ಜಯಂತಿಗೆ ತಾಲೂಕು ಮಟ್ಟದ ಹಲವು ಇಲಾಖೆಯ ಅಧಿಕಾರಿಗಳು ಗೈರು

ಸುರಪುರ ಟೈಮ್ಸ್ ವಾರ್ತೆ

ಸುರಪುರ: ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ತಾಲೂಕು ಆಡಳಿತ ವತಿಯಿಂದ ತಹಸೀಲ್ದಾರ ಕಚೇರಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ತಾಲೂಕು ಮಟ್ಟದ ಅಧಿಕಾರಿಗಳು ಗೈರಾಗುವ ಮೂಲಕ ಅಸಡ್ದೆ ತೋರಿದ್ದಾರೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಜಯಂತಿ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ತಾಲೂಕು ದಂಡಾಧಿಕಾರಿಗಳು ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಅತ್ಯಂತ ವಿಜ್ರಂಬಣೆಯಿಂದ ಆಚರಿಸಬೇಕು ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದ್ದಾರೆ. ಆದರೂ ಸಹ ಜಿಲ್ಲಾಧಿಕಾರಿಗಳು ಮತ್ತು ತಾಲೂಕ ದಂಡಾಧಿಕಾರಿಗಳ ಆದೇಶಕ್ಕೂ ಕ್ಯಾರೆಯನ್ನದೆ ದುರ್ವರ್ತನೆ ತೋರುತ್ತಿದ್ದಾರೆ.

ಇನ್ನೂ ತಾಲೂಕಿನ ಎಲ್ಲಾ ಆಡಳಿತ ಕಚೇರಿಗಳಲ್ಲಿ ಜಯಂತಿ ಕಾರ್ಯಕ್ರಮದಲ್ಲಿ ಕೆಳಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಜಯಂತಿ ಆಚರಿಸಲಾಗಿದೆ. ತಮ್ಮ ಕಚೇರಿಯಲ್ಲಿ ನಡೆದ ಕಾರ್ಯಕ್ರಮಕ್ಕೂ ತಾಲೂಕ ಮಟ್ಟದ ಗೈರಾಜುರಾಗಿ, ಆಡಳಿತ ವತಿಯಿಂದ ನಡೆದ ಕಾರ್ಯಕ್ರಮಕ್ಕೂ ಕೆಳ ಹಂತದ ನೌಕರಿದಾರರು ಬರೆದಿರುವುದು ವಿಪರ್ಯಾಸವಾಗಿದೆ.

ಹಲವು ಮಹನೀಯರ ಜಯಂತೋತ್ಸವ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಲು ಸರಕಾರ ಆದೇಶಿಸಿದ್ದರೂ, ಕೆಳಮಟ್ಟದ ಸಿಬ್ಬಂದಿಗೆ ತಮ್ಮ ಕಚೇರಿಗಳಲ್ಲಿ ಭಾವಚಿತ್ರಕ್ಕೆ ಪೂಜೆ ಮಾಡಲು ಹೇಳಿ ರಜಾ ದಿನ ಮಜಾ ಮಾಡುತ್ತಾರೆ’ ಎಂದು ಪ್ರಗತಿಪರರು ಹರಿಹಾಯ್ದರು.

ಸರ್ಕಾರದ ಆದೇಶವನ್ನು ಪಾಲಿಸಬೇಕಾದ ಅಧಿಕಾರಿಗಳೇ ಕಾಟಚಾರಕ್ಕೆ ಜಯಂತಿಗಳನ್ನು ಆಚರಿಸಿದರೆ ಹೇಗೆ, ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ಹೀಗೆ ನಡೆದುಕೊಂಡರೆ ಹೇಗೆ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ತಾಪಂ, ನಗರ ಸಭೆ,ಎರಡು ಮೂರು ಇಲಾಖೆಯವರು ಬಿಟ್ಟರೆ ಬೇರೆ ಯಾವ ಇಲಾಖೆದವರು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಿಲ್ಲ.

Leave a Reply

Your email address will not be published. Required fields are marked *

error: Content is protected !!